ಬ್ರೇಕಿಂಗ್ ನ್ಯೂಸ್
16-12-22 10:48 pm HK News Desk ಕ್ರೈಂ
ತಮಿಳುನಾಡು, ಡಿ 16: ಮದುವೆಗೂ ಮುನ್ನವೇ ಮಗುವಿಗೆ ಜನ್ಮ ನೀಡಿದ್ದ 19 ವರ್ಷದ ಯುವತಿಗೆ ಪೋಷಕರೇ ವಿಷವಿಟ್ಟು ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ಬೆಳಕಿಗೆ ಬಂದಿದೆ.
ಯುವತಿಯ ತಂದೆ ಮತ್ತು ಆಕೆಯ ಚಿಕ್ಕಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 5ರಂದು ಕಾಲುವೆಯ ಪೊದೆಯೊಂದರ ಬಳಿ ಶಿಶು ಪತ್ತೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಶಿಶುವನ್ನು ರಕ್ಷಿಸಿ ಚಿಕಿತ್ಸೆಗಾಗಿ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಶಿಶುವಿನ ಪೋಷಕರಿಗಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಇದರ ನಡುವೆ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ ಇದೇ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಅಂತೆಯೇ, ಯುವತಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಆದರೆ, ಚಿಕಿತ್ಸೆ ನೀಡುತ್ತಿರುವಾಗಲೇ ಆಕೆಯ ಸ್ಥಿತಿ ಹದಗೆಟ್ಟಿದ್ದು, ಪೊಲೀಸರ ಹೇಳಿಕೆ ದಾಖಲಿಸಿಕೊಂಡು ಸ್ವಲ್ಪ ಹೊತ್ತಿನಲ್ಲಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾಳೆ. ಇತ್ತ, ಯುವತಿಯ ಹೇಳಿಕೆ ಹಾಗೂ ತಮಗೆ ಸಿಕ್ಕ ಇತರ ಮಾಹಿತಿ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಾಗ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಇದರಿಂದ ತನಿಖೆ ಚುರುಕುಗೊಳಿಸಿದಾಗ ಕಾಲುವೆಯ ಬಳಿ ಪತ್ತೆಯಾದ ನವಜಾತ ಶಿಶು ಈ ಯುವತಿಯದ್ದೇ ಎಂದು ಬಯಲಾಗಿದೆ. ಅಲ್ಲದೇ, ಅವಿವಾಹಿತ ಯುವತಿಯಾಗಿದ್ದ ಕಾರಣ ಕುಟುಂಬದ ಬಗ್ಗೆಯೂ ಪೊಲೀಸರು ಅವಮಾನ ವ್ಯಕ್ತಪಡಿಸಿದ್ದಾರೆ. ಪೋಷಕರು ಏನೋ ಮರೆಮಾಚುತ್ತಿದ್ದಾರೆ ಎಂಬ ಸಂಶಯ ಪೊಲೀಸರಿಗೆ ಕಾಡಿದೆ.
ಹೀಗಾಗಿ ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಮದುವೆಗೂ ಮುನ್ನವೇ ಯುವತಿ ಮಗುವಿಗೆ ಜನ್ಮ ನೀಡಿದ್ದರಿಂದ ಆ ಮಗು ಸಾಕಲು ಮನಸ್ಸಿಲ್ಲದ ಪೊದೆಯೊಂದರ ಬಳಿ ಎಸೆದಿದ್ದರು. ಆದರೆ, ಮಗುವಿನ ಬಗ್ಗೆ ತನಿಖೆ ಚುರುಕಾದ ವಿಷಯ ತಿಳಿದು ಯುವತಿಗೆ ಕುಟುಂಬಸ್ಥರು ವಿಷವುಣಿಸಿದ್ದರು. ಹೀಗಾಗಿಯೇ ಯುವತಿ ವಿಷಮ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ, ಇದನ್ನೂ ಆತ್ಮಹತ್ಯೆ ಯತ್ನ ಎಂಬ ಕಥೆ ಕಟ್ಟಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಯುವತಿ ಸಾವನ್ನು ಕೊಲೆ ಎಂದು ಪರಿಗಣಿಸಿರುವ ಪೊಲೀಸರು, ತಂದೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಜೊತೆಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
A shocking incident has come to light in Tiruchi, Tamil Nadu, where a 19-year-old girl who gave birth to a child before marriage was poisoned to death by her parents. The police have arrested the girl's father and her aunt. On December 5, the baby was found near a bush by the canal. Acting on the information given by the public, the police visited the place and rescued the infant who was struggling between life and death and admitted him to the government hospital in Trichy for treatment.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm