40 ಲಕ್ಷ ಲಂಚಕ್ಕೆ ಬೇಡಿಕೆ ; ನಗರಸಭೆ ಅಧ್ಯಕ್ಷೆ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ 

17-12-22 10:50 pm       HK News Desk   ಕ್ರೈಂ

ನಿವೇಶನ ಖಾತೆ ಮಾಡಿಕೊಡಲು 40 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಲಂಚ ಪಡೆಯುವಾಗ ಗೌರಿಬಿದನೂರು ನಗರಸಭೆ ಅಧ್ಯಕ್ಷೆಯ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 

ಚಿಕ್ಕಬಳ್ಳಾಪುರ, ಡಿ.18 : ನಿವೇಶನ ಖಾತೆ ಮಾಡಿಕೊಡಲು 40 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಲಂಚ ಪಡೆಯುವಾಗ ಗೌರಿಬಿದನೂರು ನಗರಸಭೆ ಅಧ್ಯಕ್ಷೆಯ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 

ಗೌರಿಬಿದನೂರು ನಗರಸಭೆ ಅಧ್ಯಕ್ಷೆ ರೂಪಾ ಅವರ ಪತಿ ಅನಂತರಾಜು, ನಗರಸಭಾ ಸದಸ್ಯ ಗೋಪಿನಾಥ್, ನಗರಸಭೆ ಸದಸ್ಯೆಯ ಪತಿ ಮಂಜುನಾಥ್ ಹಾಗೂ ಮಾಜಿ ನಗರಸಭಾ ಸದಸ್ಯ ಮೈಲಾರಿ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

Decade-old cases await clearance by Karnataka Lokayukta | Deccan Herald

ರಿಯಲ್ ಎಸ್ಟೇಟ್ ಬಿಲ್ಡರರ ಮಂಜುನಾಥರೆಡ್ಡಿ ಎಂಬವರ ಬಳಿ 133 ನಿವೇಶನಗಳಿಗೆ ಖಾತೆ ಮಾಡಿಕೊಡುವ ಸಲುವಾಗಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. 

ಆರೋಪದ ಮೇರೆಗೆ ಬೆಂಗಳೂರು ಉತ್ತರ ತಾಲೂಕು ರಾಜನಕುಂಟೆ ಬಳಿಯ ಸಿಲ್ವರ್ ಒಕ್ ರೆಸಾರ್ಟ್ ನಲ್ಲಿ ಮಂಜುನಾಥ್ ರೆಡ್ಡಿಯಿಂದ 20 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

A bribe of 40 lakhs was demanded to account for the land, and four Lokayukta (Karnataka Lokayukta) including the husband of Gouribidanur Municipal Council Chairperson fell into the trap while accepting the bribe. Anantharaju, husband of Gouribidanur municipal council president Rupa, city council member Gopinath, city council member's husband Manjunath and ex-city council member Mylari, were caught in the raid by the Lokayukta Police.