ಬ್ರೇಕಿಂಗ್ ನ್ಯೂಸ್
24-12-22 11:58 am Mangalore Correspondent ಕ್ರೈಂ
ಮೂಡುಬಿದ್ರೆ, ಡಿ.24: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಜಾಗಕ್ಕೆ ಬೆಳ್ಳಂಬೆಳಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಜೊತೆಗೆ ದಾಳಿ ನಡೆಸಿದ ಘಟನೆ ಆಲಂಗಾರಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂಡ ಎಂಬವನ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳಗ್ಗೆ ನಾಲ್ಕು ಗಂಟೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ, ಮನೆಯ ಒಳಗಿನ ಕೋಣೆಯಲ್ಲಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದರು. ಇದಲ್ಲದೆ, ಕಡಿಯಲು ತಂದಿದ್ದ ನಾಲ್ಕು ಸಣ್ಣ ಪ್ರಾಯದ ಕರುಗಳನ್ನು ಒಳಗಡೆ ಕಟ್ಟಿದ್ದರು. ಭಾರೀ ಪ್ರಮಾಣದ ದನದ ಮಾಂಸ ಮತ್ತು ನಾಲ್ಕು ಗೋವುಗಳನ್ನು ವಶಕ್ಕೆ ಪಡೆಯಲಾಗಿದೆ.



ಆನಂತರ, ಮನೆ ಪಕ್ಕದ ತೋಟದಲ್ಲಿ ಅಗೆದು ನೋಡಿದಾಗ ಹಲವಾರು ದನದ ತಲೆಯ ಭಾಗಗಳು ಪತ್ತೆಯಾಗಿವೆ. ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2020ರ ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ, ಲೈಸನ್ಸ್ ರಹಿತ ಯಾವುದೇ ಜಾಗದಲ್ಲಿ ಗೋವುಗಳನ್ನು ಕಡಿಯುವಂತಿಲ್ಲ. ಅಕ್ರಮ ಕಸಾಯಿಖಾನೆ ಪತ್ತೆಯಾದಲ್ಲಿ ಆ ಜಾಗವನ್ನು ಸರಕಾರದ ವಶಕ್ಕೆ ಪಡೆಯಬೇಕು. ಮನೆಯಾಗಿದ್ದರೆ, ಕಟ್ಟಡ ಕಂದಾಯ ಇಲಾಖೆಗೆ ಸೇರುತ್ತದೆ. ಈ ರೀತಿಯ ಕಠಿಣ ಕ್ರಮದಿಂದಾಗಿ ಅಕ್ರಮ ಕಸಾಯಿಖಾನೆ ಕಡಿಮೆಯಾಗಿತ್ತು. 13 ವಯಸ್ಸಿನ ಒಳಗಿನ ಗೋವುಗಳನ್ನು ಕಡಿಯುವಂತಿಲ್ಲ ಎಂಬ ನಿಯಮದಿಂದಾಗಿ ಅಧಿಕೃತ ಕಸಾಯಿಖಾನೆಗಳಿಗೆ ಮಾಂಸಕ್ಕಾಗಿ ಗೋವುಗಳ ಪೂರೈಕೆ ಆಗುತ್ತಿಲ್ಲ. ಗೋಹತ್ಯೆ ಕಾನೂನು ಬಂದ ಬಳಿಕ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಅಕ್ರಮ ಗೋಹತ್ಯೆಗೆ ಕಡಿವಾಣ ಬಿದ್ದಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಗೋಹತ್ಯೆ ನಡೆಸಿದ ಜಾಗವನ್ನು ಸರಕಾರದ ವಶಕ್ಕೆ ಪಡೆಯಲಾಗಿದೆ.
Mangalore Illegal Sluaughter house inside home in Moodbidri, hindu jagarana vedike raids house
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm