ಬ್ರೇಕಿಂಗ್ ನ್ಯೂಸ್
24-12-22 11:58 am Mangalore Correspondent ಕ್ರೈಂ
ಮೂಡುಬಿದ್ರೆ, ಡಿ.24: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಜಾಗಕ್ಕೆ ಬೆಳ್ಳಂಬೆಳಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಜೊತೆಗೆ ದಾಳಿ ನಡೆಸಿದ ಘಟನೆ ಆಲಂಗಾರಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂಡ ಎಂಬವನ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳಗ್ಗೆ ನಾಲ್ಕು ಗಂಟೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ, ಮನೆಯ ಒಳಗಿನ ಕೋಣೆಯಲ್ಲಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದರು. ಇದಲ್ಲದೆ, ಕಡಿಯಲು ತಂದಿದ್ದ ನಾಲ್ಕು ಸಣ್ಣ ಪ್ರಾಯದ ಕರುಗಳನ್ನು ಒಳಗಡೆ ಕಟ್ಟಿದ್ದರು. ಭಾರೀ ಪ್ರಮಾಣದ ದನದ ಮಾಂಸ ಮತ್ತು ನಾಲ್ಕು ಗೋವುಗಳನ್ನು ವಶಕ್ಕೆ ಪಡೆಯಲಾಗಿದೆ.



ಆನಂತರ, ಮನೆ ಪಕ್ಕದ ತೋಟದಲ್ಲಿ ಅಗೆದು ನೋಡಿದಾಗ ಹಲವಾರು ದನದ ತಲೆಯ ಭಾಗಗಳು ಪತ್ತೆಯಾಗಿವೆ. ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2020ರ ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ, ಲೈಸನ್ಸ್ ರಹಿತ ಯಾವುದೇ ಜಾಗದಲ್ಲಿ ಗೋವುಗಳನ್ನು ಕಡಿಯುವಂತಿಲ್ಲ. ಅಕ್ರಮ ಕಸಾಯಿಖಾನೆ ಪತ್ತೆಯಾದಲ್ಲಿ ಆ ಜಾಗವನ್ನು ಸರಕಾರದ ವಶಕ್ಕೆ ಪಡೆಯಬೇಕು. ಮನೆಯಾಗಿದ್ದರೆ, ಕಟ್ಟಡ ಕಂದಾಯ ಇಲಾಖೆಗೆ ಸೇರುತ್ತದೆ. ಈ ರೀತಿಯ ಕಠಿಣ ಕ್ರಮದಿಂದಾಗಿ ಅಕ್ರಮ ಕಸಾಯಿಖಾನೆ ಕಡಿಮೆಯಾಗಿತ್ತು. 13 ವಯಸ್ಸಿನ ಒಳಗಿನ ಗೋವುಗಳನ್ನು ಕಡಿಯುವಂತಿಲ್ಲ ಎಂಬ ನಿಯಮದಿಂದಾಗಿ ಅಧಿಕೃತ ಕಸಾಯಿಖಾನೆಗಳಿಗೆ ಮಾಂಸಕ್ಕಾಗಿ ಗೋವುಗಳ ಪೂರೈಕೆ ಆಗುತ್ತಿಲ್ಲ. ಗೋಹತ್ಯೆ ಕಾನೂನು ಬಂದ ಬಳಿಕ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಅಕ್ರಮ ಗೋಹತ್ಯೆಗೆ ಕಡಿವಾಣ ಬಿದ್ದಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಗೋಹತ್ಯೆ ನಡೆಸಿದ ಜಾಗವನ್ನು ಸರಕಾರದ ವಶಕ್ಕೆ ಪಡೆಯಲಾಗಿದೆ.
Mangalore Illegal Sluaughter house inside home in Moodbidri, hindu jagarana vedike raids house
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm