ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm