ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm