ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm