ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
19-04-24 04:27 pm
Bangalore Correspondent
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 05:18 pm
Mangalore Correspondent
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm