ಬ್ರೇಕಿಂಗ್ ನ್ಯೂಸ್
26-12-22 05:35 pm Mangalore Correspondent ಕ್ರೈಂ
ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm