ಬ್ರೇಕಿಂಗ್ ನ್ಯೂಸ್
26-12-22 05:35 pm Mangalore Correspondent ಕ್ರೈಂ
ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm