ಬ್ರೇಕಿಂಗ್ ನ್ಯೂಸ್
            
                        26-12-22 05:35 pm Mangalore Correspondent ಕ್ರೈಂ
            ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
            
            
            Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm