ಬ್ರೇಕಿಂಗ್ ನ್ಯೂಸ್
26-12-22 05:35 pm Mangalore Correspondent ಕ್ರೈಂ
ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am