ಬ್ರೇಕಿಂಗ್ ನ್ಯೂಸ್
27-12-22 01:50 pm HK News Desk ಕ್ರೈಂ
ಲಕ್ನೋ, ಡಿ.27 : ಹಿಂದು ಯುವತಿಯನ್ನು ಮದುವೆಯಾಗಿ ಮುಸ್ಲಿಂ ಆಗಿ ಮತಾಂತರಗೊಳಿಸಿದ್ದಲ್ಲದೆ, ಏಳು ವರ್ಷಗಳ ಜೀವನದ ನಂತರ ಆಕೆ ಜೊತೆ ಜಗಳವಾಡಿ ಗಂಡನೇ ವಿದ್ಯುತ್ ಶಾಕ್ ಕೊಟ್ಟು ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಲಖೀಂಪುರ್ ಜಿಲ್ಲೆಯಲ್ಲಿ ನಡೆದಿದೆ.
ಉಮಾ ಶರ್ಮಾ ಎಂಬ ಯುವತಿ ಮುಸ್ಲಿಂ ಯುವಕ ವಾಸಿಂ ಅಹ್ಮದ್ ಎಂಬವನ ಜೊತೆ ಓಡಿ ಹೋಗಿ ಮದುವೆಯಾಗಿದ್ದಳು. ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಉಮಾ ಶರ್ಮಾಳನ್ನು ಆಕೆಯ ಪತಿ ವಾಸಿಂ ಅಹ್ಮದ್ ಇಸ್ಲಾಂಗೆ ಮತಾಂತರ ಮಾಡಿದ್ದು ಅಕ್ಸಾ ಫಾತಿಮಾ ಎಂದು ಹೆಸರು ಬದಲಿಸಿದ್ದ. ಮದುವೆಯಾಗಿ ಏಳು ವರ್ಷಗಳಾಗಿದ್ದು ಇಬ್ಬರು ಗಂಡು ಮಕ್ಕಳಿದ್ದಾರೆ. ಈ ನಡುವೆ ಮನಸ್ತಾಪ ಉಂಟಾಗಿದ್ದು ಇತ್ತೀಚೆಗೆ ಮನೆಯಲ್ಲಿ ದಿನವೂ ಜಗಳ ಮಾಡುತ್ತಿದ್ದರು. ಇದೇ ಕೋಪದಲ್ಲಿ ಗಂಡ ವಾಸಿಮ್ ಅಹ್ಮದ್, ಪತ್ನಿಗೆ ಕರೆಂಟ್ ಶಾಕ್ ನೀಡಿ ಕೊಲೆ ಮಾಡಿದ್ದಾನೆ. ನಂತರ ತನ್ನ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶವವನ್ನು ಹೂತು ಹಾಕಿದ್ದಾನೆ.
ಘಟನೆ ಸಂದರ್ಭದಲ್ಲಿ ವಾಸಿಮ್ ಅಹ್ಮದ್ ತಾಯಿ ಆಶಿಯಾ ಬೇಗಂ ಊರಿನಲ್ಲಿ ಇರಲಿಲ್ಲ. ಮಗಳ ಮನೆಗೆ ಹೋಗಿದ್ದರು. ಎರಡು ದಿನಗಳ ನಂತರ ಮನೆಗೆ ಬಂದ ತಾಯಿ ಆಶಿಯಾ ಸೊಸೆಯ ಬಗ್ಗೆ ವಿಚಾರಿಸಿದ್ದು ಪತ್ನಿ ಹೊರಗೆ ಹೋಗಿದ್ದಾಳೆ ಎಂದು ಮಗ ಸುಳ್ಳು ಹೇಳಿದ್ದ. ಸೊಸೆ ದಿನ ಕಳೆದರೂ ಕಾಣದಿದ್ದಾಗ ಅತ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೊಲೀಸರು ಮನೆಗೆ ಬಂದು ಪರಿಶೀಲನೆ ನಡೆಸಿದ್ದಾರೆ.
ಮನೆಯ ಒಳಗೆ ನೆಲ ಅಗೆದಿರುವುದನ್ನು ನೋಡಿ ಅನುಮಾನದ ಮೇಲೆ, ಪೊಲೀಸರು ಆ ಜಾಗವನ್ನು ಅಗೆದು ನೋಡಿದಾಗ ಉಮಾ ಶರ್ಮಾಳ ಮೃತದೇಹ ಹೂತಿರುವುದು ಪತ್ತೆಯಾಗಿದೆ. ಆರೋಪಿ ವಾಸಿಮ್ ಅಹ್ಮದ್ನನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಲಖೀಂ ಪುರ್ ಖೇರಿ ಜಿಲ್ಲೆಯ ಹಫೀಜ್ ಪುರ್ ಗ್ರಾಮದಲ್ಲಿ ಘಟನೆ ನಡೆದಿದೆ.
A young Muslim man who fell in love with a Hindu young woman and married her, killed her and buried her under the bed room in Uttar Pradesh. Such a terrible incident took place in Hafijapur village of Lakhimpur Kheri district. Mohammed Wasi brutally killed his wife Uma Sharma alias Aksha Fatima. He beat her, then gave her an electric shock, and then buried her dead body in the room of his house.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm