ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm