ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm