ಬ್ರೇಕಿಂಗ್ ನ್ಯೂಸ್
03-01-23 05:00 pm Mangalore Correspondent ಕ್ರೈಂ
ಮಂಗಳೂರು, ಜ.3 : ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32) ಮತ್ತು ಜೆಪ್ಪಿನಮೊಗರಿನ ರಜೀಮ್ ಯಾನೆ ರಾಫಿ (31) ಬಂಧಿತರು.
ಆರೋಪಿಗಳು ಜನವರಿ 2 ರಂದು ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಕೂಟರ್ ಒಂದನ್ನು ಸುಲಿಗೆ ಮಾಡಿದ್ದರು. ಅದೇ ದಿನ ಸಂಜೆ ಈ ಸ್ಕೂಟರ್ನಲ್ಲಿ ಆರೋಪಿಗಳು ಖೋಟಾ ನೋಟುಗಳನ್ನು ಸಾಗಿಸುತ್ತಿದ್ದರು. ನಂತೂರಿನಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ಕಂಡುಬಂದಿದ್ದು ಇವರನ್ನು ತಪಾಸಣೆ ನಡೆಸಿದಾಗ 500 ರೂ. ಮುಖಬೆಲೆಯ 4.50 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ನಕಲಿ ನೋಟುಗಳನ್ನು ಪಡೆದಿದ್ದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ. ನಂತೂರು ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರ್ ನಿಲ್ಲಿಸದೆ ಅತಿವೇಗದಿಂದ ಸಾಗಿತ್ತು. ಬೆನ್ನತ್ತಿ ಹಿಡಿದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ಖೋಟಾ ನೋಟು ಪತ್ತೆಯಾಗಿದೆ.

ಡ್ಯಾನಿಯಲ್ ಎಂಬಾತ ಇದಕ್ಕೂ ಮೊದಲೇ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿದ್ದ. ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಕಲಿ ನೋಟು ಮುದ್ರಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ವಿತರಿಸಿದ್ದ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿ ನಿಜಾಂ ವಿರುದ್ದ ಈ ಹಿಂದೆ 2015 ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಾಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಆರೋಪಿ ರಾಫಿ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನವನ್ನು ಕಮಿಷನರ್ ಘೋಷಣೆ ಮಾಡಿದ್ದಾರೆ.
Police arrested two persons with Rs 500 counterfeit currency notes worth Rs 4.5 lac. The arrested are identified as Nizamuddin (32) from BC Road and Rajeem (31) from Jeppu.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm