ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am