ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm