ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm