ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm