ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm