ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.
ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm