ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm