ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm