ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm