ಬ್ರೇಕಿಂಗ್ ನ್ಯೂಸ್
07-01-23 06:22 pm Mangalore Correspondent ಕ್ರೈಂ
ಉಳ್ಳಾಲ, ಜ.7: ಬೈಕಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನ ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಢಾರಿ ನೇತೃತ್ವದ ತಂಡ ಬಂಧಿಸಿದ್ದು, ತಿಂಗಳ ಅಂತರದಲ್ಲಿ ಕೊಣಾಜೆ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಮೂರು ಡ್ರಗ್ಸ್ ಪ್ರಕರಣಗಳ ಭರ್ಜರಿ ಬೇಟೆ ನಡೆಸಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರ, ಗೇರುಕಟ್ಟೆ ನಿವಾಸಿ ಸದ್ದಾಂ ಅಲಿಯಾಸ್ ಅಬ್ದುಲ್ಲ ಬಂಧಿತ ಡ್ರಗ್ ಪೆಡ್ಲರ್. ನಿನ್ನೆ ಸಂಜೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ವಿಜಯ ನಗರ ಎಂಬಲ್ಲಿ ಬಂಧಿತ ಸದ್ದಾಂ ಯಮಾಹ ಎಫ್ ಝಿ ಬೈಕಲ್ಲಿ ನಿಷೇಧಿತ ಎಂ ಡಿಎಂಎ ಮಾದಕ ವಸ್ತುವನ್ನ ಮಾರಾಟ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ಶರಣಪ್ಪ ಮತ್ತು ತಂಡವು ದಾಳಿ ನಡೆಸಿ ಆರೋಪಿಯನ್ನ ಅಮಲು ಪದಾರ್ಥದೊಂದಿಗೆ ವಶಕ್ಕೆ ಪಡೆದಿದೆ.
![]()
ಬಂಧಿತನಿಂದ 40,000 ರೂಪಾಯಿ ಮೌಲ್ಯದ 8 ಗ್ರಾಂ ಎಂಡಿಎಂಎ ಮಾತ್ರೆ, 1,56,000 ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಗಳನ್ನ ವಶ ಪಡಿಸಿಕೊಂಡಿದ್ದಾರೆ.
ಕೇರಳ-ಕರ್ನಾಟಕ ಗಡಿ ಪ್ರದೇಶ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕೇರಳಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿದೆ. ಕೊಣಾಜೆ ಠಾಣೆಯ ದಕ್ಷ ಪಿಎಸ್ ಐ ಶರಣಪ್ಪ ಮತ್ತು ತಂಡ ಕಳೆದ ಡಿ.17 ರಂದು ಬೋಳಿಯಾರ್ ಮತ್ತು ಡಿ.26 ರಂದು ಚೇಳೂರು ಚೆಕ್ ಪೋಸ್ಟಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇದೀತ ಗಾಂಜಾ , ಎಮ್ ಡಿಎಮ್ಎ ಸಾಗಾಟ ನಡೆಸುತ್ತಿದ್ದ ಪೆಡ್ಲರ್ಗಳನ್ನ ಬಂಧಿಸಿದ್ದರು.

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆನ್ಶುಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಹಾಗೂ ಎಸಿಪಿ ದಿನಕರ ಶೆಟ್ಟಿಯವರ ನಿರ್ದೇಶನದಂತೆ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪಿ.ಎಸ್ಸೈ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ, ಸುರೇಶ್, ಪ್ರಶಾಂತ್, ದೀಪಕ್, ಶೈಲೇಂದ್ರ, ಮಂಜಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Mdma Drug supply by bike in Ullal, one arrested. In one month span three have been arrested by Konaje police in Ullal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm