ಬ್ರೇಕಿಂಗ್ ನ್ಯೂಸ್
08-01-23 01:08 pm Mangalore Correspondent ಕ್ರೈಂ
ಮಂಗಳೂರು, ಜ.8 : ಗಾಂಜಾ, ಡ್ರಗ್ಸ್ ಮಾರಾಟ ಪ್ರಕರಣದ ಪ್ರತ್ಯೇಕ ಘಟನೆಯಲ್ಲಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಭಾರತ ಮೂಲದ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ(38), ಮುಡಿಪು ಗೌಸಿಯಾ ಕಾಂಪೌಂಡ್ ನಿವಾಸಿ ನವಾಝ್ (35), ಕಾಸರಗೋಡಿನ ಬಂಬ್ರಾಣ ನಿವಾಸಿ ಕಿರಣ್ ರಾಜ್ ಶೆಟ್ಟಿ (24) ಬಂಧಿತರು.
ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ವಿದೇಶದಲ್ಲಿ ನೆಲೆಸಿದ್ದ ಭಾರತೀಯ ಪ್ರಜೆಯಾಗಿದ್ದು, ಸದ್ಯಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಫ್ಲಾಟ್ ಒಂದರಲ್ಲಿ ವಾಸವಿದ್ದು ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದು ಫ್ಲಾಟಿಗೆ ದಾಳಿ ನಡೆಸಿದ್ದು ಒಟ್ಟು 2 ಕೆ ಜಿ ತೂಕದ ರೂ.50,000 ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, ನಗದು ರೂ. 7000, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ತಂದು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ.
ಇನ್ನೊಂದು ಪ್ರಕರಣದಲ್ಲಿ MDMA ಡ್ರಗ್ಸ್ ಅನ್ನು ಕೇರಳ-ಕರ್ನಾಟಕದ ಗಡಿಭಾಗ ಕೊಣಾಜೆ, ಮುಡಿಪು ಭಾಗದಲ್ಲಿ ಮಾರಾಟ ಮಾಡುತ್ತಿದ್ದ ನವಾಝ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಗ್ರಾಂ ತೂಕದ ರೂ. 75,000/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ವಶಕ್ಕೆ ಪಡೆಯಲಾಗಿದೆ. ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ , ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಮಾರುತಿ ಆಲ್ಟೋ ಕಾರಿನಲ್ಲಿ 27 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಕಾಸರಗೋಡಿನ ಕಿರಣ್ ರಾಜ್ ಶೆಟ್ಟಿ(24)ಯನ್ನು ಬಂಧಿಸಲಾಗಿದೆ. ಮಂಗಳೂರಿನ ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗಡಿಭಾಗದ ಕೇರಳ, ಕರ್ನಾಟಕದಲ್ಲಿ ಗಾಂಜಾ ಪೂರೈಸುತ್ತಿದ್ದ ಈತನ ವಿರುದ್ಧ ಕಾಸರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Three have been arrested for selling Ganja and drugs in Mangalore by CCB police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am