ಬ್ರೇಕಿಂಗ್ ನ್ಯೂಸ್
11-01-23 12:02 pm HK News Desk ಕ್ರೈಂ
ವಾರಂಗಲ್, ಜ.11: ವಂಚಕನೊಬ್ಬ ಅನಾಥ ಭಿಕ್ಷುಕನೊಬ್ಬನಿಗೆ 50 ಲಕ್ಷ ರೂ.ಗಳ ವಿಮೆ ಮಾಡಿಸಿ, ವಿಮೆಯ ಹಣವನ್ನು ದೋಚಿಕೊಳ್ಳಲು ಪೊಲೀಸ್ ಪೇದೆ ಮತ್ತು ಸಹಚರರ ಮೂಲಕವೇ ಭಿಕ್ಷುಕನನ್ನು ಅಪಹರಿಸಿ ಭೀಕರವಾಗಿ ಕೊಲ್ಲಿಸಿದ ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್ನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಪೇದೆ ಸೇರಿದಂತೆ ನಾಲ್ವರನ್ನು ವಾರಂಗಲ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯನ್ನು ವಾರಂಗಲ್ ಜಿಲ್ಲೆಯ ಬೋಡಾ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇತರ ಮೂವರು ಆರೋಪಿಗಳಲ್ಲಿ ಮೋತಿಲಾಲ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿದ್ದಾನೆ. ಇತರು ಸತೀಶ್ ಮತ್ತು ಸಾಮ್ಮಣ್ಣ.
ವಂಚಕ ಶ್ರೀಕಾಂತ್ ಬೋಡಾ ಕಳೆದ ಡಿಸೆಂಬರ್ನಲ್ಲಿ ಭಿಕ್ಷುಕನನ್ನು ಕೊಂದು ವಿಮೆ ಹಣ ಪಡೆಯಲು ಸಂಚು ಹೂಡಿದ್ದ. ವಿಮೆ ಕಂಪನಿಯೊಂದರಿಂದ ಆತನ ಹೆಸರಿನಲ್ಲಿ 50 ಲಕ್ಷ ರೂ.ಗೆ ವಿಮೆ ಮಾಡಿಸಿದ್ದ. ಬಳಿಕ ಪೊಲೀಸ್ ಕಾನ್ಸ್ಟೇಬಲ್ ಮೋತಿಲಾಲ್ ಮತ್ತು ಸಹಚರರನ್ನು ಭಿಕ್ಷುಕ ಹತ್ಯೆಗೆ ನಿಯೋಜಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಪ್ಲಾನ್ ಪ್ರಕಾರ ಪೊಲೀಸ್ ಪೇದೆ ಮತ್ತು ಇತರರು ಭಿಕ್ಷುಕನನ್ನು ಕಾರಿನಲ್ಲಿ ಅಪಹರಿಸಿದ್ದರು. ಅತಿಯಾಗಿ ಮದ್ಯವನ್ನು ಕುಡಿಸಿದ ಬಳಿಕ ಭೀಕರವಾಗಿ ಕೊಂದು ಹಾಕಿದ್ದರು. ಬಳಿಕ ಹೆಣವನ್ನು ರಸ್ತೆಯಲ್ಲಿಟ್ಟು ಅದರ ಮೇಲೆ ಕಾರನ್ನು ಎರಡು ಸಲ ಹರಿಸಿ, ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.
ಭಿಕ್ಷುಕನ ಶವದ ಮರಣೋತ್ತರ ಪರೀಕ್ಷೆಯ ವೇಳೆ ಪೊಲೀಸರಿಗೆ ಅನುಮಾನ ಉಂಟಾಗಿತ್ತು. ಸಾವಿಗೆ ಮುನ್ನ ಉಂಟಾಗಿದ್ದ ಗಾಯಗಳು ಸಂದೇಹಾಸ್ಪದವಾಗಿತ್ತು. ಈ ನಡುವೆ ಪ್ರಮುಖ ಆರೋಪಿ ಶ್ರೀಕಾಂತ್ ಬೋಡಾ ವಿಮೆ ಪರಿಹಾರ ಕ್ಲೇಮ್ ಮಾಡಿಕೊಳ್ಳಲು ವಿಮೆ ಕಂಪನಿಯನ್ನು ಸಂಪರ್ಕಿಸಿದ್ದ. ತನ್ನ ಕಾರಿನ ಚಾಲಕ ವಾಹನ ಚಲಾಯಿಸಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಆತ ಹೇಳಿದ್ದ. ಕ್ಲೇಮ್ ಅನ್ನು ಖಾತರಿಪಡಿಸಿಕೊಳ್ಳಲು ವಿಮೆ ಕಂಪನಿಯು ಪೊಲೀಸರನ್ನು ಸಂಪರ್ಕಿಸಿತ್ತು. ಆಗ ಪೊಲೀಸರ ಕೈಗೆ ಪಾತಕಿಗಳು ಸಿಕ್ಕಿಬಿದ್ದಿದ್ದಾರೆ.
In a shocking incident, a serial fraudster allegedly insured and got killed an orphan beggar to grab the insurance money in Telangana's Warangal in December, police said. Four persons including a police constable who led the hitsquad were arrested by Warangal Police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am