ಬ್ರೇಕಿಂಗ್ ನ್ಯೂಸ್
11-01-23 12:02 pm HK News Desk ಕ್ರೈಂ
ವಾರಂಗಲ್, ಜ.11: ವಂಚಕನೊಬ್ಬ ಅನಾಥ ಭಿಕ್ಷುಕನೊಬ್ಬನಿಗೆ 50 ಲಕ್ಷ ರೂ.ಗಳ ವಿಮೆ ಮಾಡಿಸಿ, ವಿಮೆಯ ಹಣವನ್ನು ದೋಚಿಕೊಳ್ಳಲು ಪೊಲೀಸ್ ಪೇದೆ ಮತ್ತು ಸಹಚರರ ಮೂಲಕವೇ ಭಿಕ್ಷುಕನನ್ನು ಅಪಹರಿಸಿ ಭೀಕರವಾಗಿ ಕೊಲ್ಲಿಸಿದ ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್ನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಪೇದೆ ಸೇರಿದಂತೆ ನಾಲ್ವರನ್ನು ವಾರಂಗಲ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯನ್ನು ವಾರಂಗಲ್ ಜಿಲ್ಲೆಯ ಬೋಡಾ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇತರ ಮೂವರು ಆರೋಪಿಗಳಲ್ಲಿ ಮೋತಿಲಾಲ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿದ್ದಾನೆ. ಇತರು ಸತೀಶ್ ಮತ್ತು ಸಾಮ್ಮಣ್ಣ.
ವಂಚಕ ಶ್ರೀಕಾಂತ್ ಬೋಡಾ ಕಳೆದ ಡಿಸೆಂಬರ್ನಲ್ಲಿ ಭಿಕ್ಷುಕನನ್ನು ಕೊಂದು ವಿಮೆ ಹಣ ಪಡೆಯಲು ಸಂಚು ಹೂಡಿದ್ದ. ವಿಮೆ ಕಂಪನಿಯೊಂದರಿಂದ ಆತನ ಹೆಸರಿನಲ್ಲಿ 50 ಲಕ್ಷ ರೂ.ಗೆ ವಿಮೆ ಮಾಡಿಸಿದ್ದ. ಬಳಿಕ ಪೊಲೀಸ್ ಕಾನ್ಸ್ಟೇಬಲ್ ಮೋತಿಲಾಲ್ ಮತ್ತು ಸಹಚರರನ್ನು ಭಿಕ್ಷುಕ ಹತ್ಯೆಗೆ ನಿಯೋಜಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಪ್ಲಾನ್ ಪ್ರಕಾರ ಪೊಲೀಸ್ ಪೇದೆ ಮತ್ತು ಇತರರು ಭಿಕ್ಷುಕನನ್ನು ಕಾರಿನಲ್ಲಿ ಅಪಹರಿಸಿದ್ದರು. ಅತಿಯಾಗಿ ಮದ್ಯವನ್ನು ಕುಡಿಸಿದ ಬಳಿಕ ಭೀಕರವಾಗಿ ಕೊಂದು ಹಾಕಿದ್ದರು. ಬಳಿಕ ಹೆಣವನ್ನು ರಸ್ತೆಯಲ್ಲಿಟ್ಟು ಅದರ ಮೇಲೆ ಕಾರನ್ನು ಎರಡು ಸಲ ಹರಿಸಿ, ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.
ಭಿಕ್ಷುಕನ ಶವದ ಮರಣೋತ್ತರ ಪರೀಕ್ಷೆಯ ವೇಳೆ ಪೊಲೀಸರಿಗೆ ಅನುಮಾನ ಉಂಟಾಗಿತ್ತು. ಸಾವಿಗೆ ಮುನ್ನ ಉಂಟಾಗಿದ್ದ ಗಾಯಗಳು ಸಂದೇಹಾಸ್ಪದವಾಗಿತ್ತು. ಈ ನಡುವೆ ಪ್ರಮುಖ ಆರೋಪಿ ಶ್ರೀಕಾಂತ್ ಬೋಡಾ ವಿಮೆ ಪರಿಹಾರ ಕ್ಲೇಮ್ ಮಾಡಿಕೊಳ್ಳಲು ವಿಮೆ ಕಂಪನಿಯನ್ನು ಸಂಪರ್ಕಿಸಿದ್ದ. ತನ್ನ ಕಾರಿನ ಚಾಲಕ ವಾಹನ ಚಲಾಯಿಸಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಆತ ಹೇಳಿದ್ದ. ಕ್ಲೇಮ್ ಅನ್ನು ಖಾತರಿಪಡಿಸಿಕೊಳ್ಳಲು ವಿಮೆ ಕಂಪನಿಯು ಪೊಲೀಸರನ್ನು ಸಂಪರ್ಕಿಸಿತ್ತು. ಆಗ ಪೊಲೀಸರ ಕೈಗೆ ಪಾತಕಿಗಳು ಸಿಕ್ಕಿಬಿದ್ದಿದ್ದಾರೆ.
In a shocking incident, a serial fraudster allegedly insured and got killed an orphan beggar to grab the insurance money in Telangana's Warangal in December, police said. Four persons including a police constable who led the hitsquad were arrested by Warangal Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm