ಬ್ರೇಕಿಂಗ್ ನ್ಯೂಸ್
11-01-23 12:02 pm HK News Desk ಕ್ರೈಂ
ವಾರಂಗಲ್, ಜ.11: ವಂಚಕನೊಬ್ಬ ಅನಾಥ ಭಿಕ್ಷುಕನೊಬ್ಬನಿಗೆ 50 ಲಕ್ಷ ರೂ.ಗಳ ವಿಮೆ ಮಾಡಿಸಿ, ವಿಮೆಯ ಹಣವನ್ನು ದೋಚಿಕೊಳ್ಳಲು ಪೊಲೀಸ್ ಪೇದೆ ಮತ್ತು ಸಹಚರರ ಮೂಲಕವೇ ಭಿಕ್ಷುಕನನ್ನು ಅಪಹರಿಸಿ ಭೀಕರವಾಗಿ ಕೊಲ್ಲಿಸಿದ ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್ನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಪೇದೆ ಸೇರಿದಂತೆ ನಾಲ್ವರನ್ನು ವಾರಂಗಲ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯನ್ನು ವಾರಂಗಲ್ ಜಿಲ್ಲೆಯ ಬೋಡಾ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇತರ ಮೂವರು ಆರೋಪಿಗಳಲ್ಲಿ ಮೋತಿಲಾಲ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿದ್ದಾನೆ. ಇತರು ಸತೀಶ್ ಮತ್ತು ಸಾಮ್ಮಣ್ಣ.
ವಂಚಕ ಶ್ರೀಕಾಂತ್ ಬೋಡಾ ಕಳೆದ ಡಿಸೆಂಬರ್ನಲ್ಲಿ ಭಿಕ್ಷುಕನನ್ನು ಕೊಂದು ವಿಮೆ ಹಣ ಪಡೆಯಲು ಸಂಚು ಹೂಡಿದ್ದ. ವಿಮೆ ಕಂಪನಿಯೊಂದರಿಂದ ಆತನ ಹೆಸರಿನಲ್ಲಿ 50 ಲಕ್ಷ ರೂ.ಗೆ ವಿಮೆ ಮಾಡಿಸಿದ್ದ. ಬಳಿಕ ಪೊಲೀಸ್ ಕಾನ್ಸ್ಟೇಬಲ್ ಮೋತಿಲಾಲ್ ಮತ್ತು ಸಹಚರರನ್ನು ಭಿಕ್ಷುಕ ಹತ್ಯೆಗೆ ನಿಯೋಜಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಪ್ಲಾನ್ ಪ್ರಕಾರ ಪೊಲೀಸ್ ಪೇದೆ ಮತ್ತು ಇತರರು ಭಿಕ್ಷುಕನನ್ನು ಕಾರಿನಲ್ಲಿ ಅಪಹರಿಸಿದ್ದರು. ಅತಿಯಾಗಿ ಮದ್ಯವನ್ನು ಕುಡಿಸಿದ ಬಳಿಕ ಭೀಕರವಾಗಿ ಕೊಂದು ಹಾಕಿದ್ದರು. ಬಳಿಕ ಹೆಣವನ್ನು ರಸ್ತೆಯಲ್ಲಿಟ್ಟು ಅದರ ಮೇಲೆ ಕಾರನ್ನು ಎರಡು ಸಲ ಹರಿಸಿ, ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.
ಭಿಕ್ಷುಕನ ಶವದ ಮರಣೋತ್ತರ ಪರೀಕ್ಷೆಯ ವೇಳೆ ಪೊಲೀಸರಿಗೆ ಅನುಮಾನ ಉಂಟಾಗಿತ್ತು. ಸಾವಿಗೆ ಮುನ್ನ ಉಂಟಾಗಿದ್ದ ಗಾಯಗಳು ಸಂದೇಹಾಸ್ಪದವಾಗಿತ್ತು. ಈ ನಡುವೆ ಪ್ರಮುಖ ಆರೋಪಿ ಶ್ರೀಕಾಂತ್ ಬೋಡಾ ವಿಮೆ ಪರಿಹಾರ ಕ್ಲೇಮ್ ಮಾಡಿಕೊಳ್ಳಲು ವಿಮೆ ಕಂಪನಿಯನ್ನು ಸಂಪರ್ಕಿಸಿದ್ದ. ತನ್ನ ಕಾರಿನ ಚಾಲಕ ವಾಹನ ಚಲಾಯಿಸಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಆತ ಹೇಳಿದ್ದ. ಕ್ಲೇಮ್ ಅನ್ನು ಖಾತರಿಪಡಿಸಿಕೊಳ್ಳಲು ವಿಮೆ ಕಂಪನಿಯು ಪೊಲೀಸರನ್ನು ಸಂಪರ್ಕಿಸಿತ್ತು. ಆಗ ಪೊಲೀಸರ ಕೈಗೆ ಪಾತಕಿಗಳು ಸಿಕ್ಕಿಬಿದ್ದಿದ್ದಾರೆ.
In a shocking incident, a serial fraudster allegedly insured and got killed an orphan beggar to grab the insurance money in Telangana's Warangal in December, police said. Four persons including a police constable who led the hitsquad were arrested by Warangal Police.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm