ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.

ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm