ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.

ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm