ಬ್ರೇಕಿಂಗ್ ನ್ಯೂಸ್
18-01-23 10:00 pm Bangalore Correspondent ಕ್ರೈಂ
ಬೆಂಗಳೂರು, ಜ.17: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ಇಂದು ಸಂಜೆ ನಡೆದಿದೆ.
ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಇಂದು ಸಂಜೆ 5 ಗಂಟೆ ಸುಮಾರಿಗೆ ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ಯವತಿ ದಿಬ್ಬೂರು ಗೇಟಿನಲ್ಲಿ ಬಸ್ನಿಂದ ಇಳಿದಿದ್ದಾರೆ. ಅಲ್ಲಿಂದ ಶಾನುಭೋಗನಹಳ್ಳಿಗೆ ನಡೆದು ಹೋಗುವಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಕತ್ತುಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದರು.
ಹತ್ಯೆಗೀಡಾದ ಯುವತಿ ಯಲಹಂಕದ ಕಾಲೇಜು ಒಂದರಲ್ಲಿ ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಪ್ರೀತಿ ನಿರಾಕರಿಸಿದ ಹಿನ್ನೆಲೆ ಯುವತಿಯನ್ನು ಹತ್ಯೆ ಮಾಡಲಾಗಿದೆ.
ಸದ್ಯ ಈ ಪ್ರಕರಣದಲ್ಲಿ ಪೊಲೀಸರು ಆರೋಪಿ ಮಧುಚಂದ್ರನನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿ ಕೊಲೆ ಮಾಡಿದ ಬಳಿಕ ಆಂಧ್ರ ಪ್ರದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ವರ್ಷಗಳಿಂದ ಕಾಲೇಜು ರಜಾ ದಿನಗಳಲ್ಲಿ ಸೀಬೆ ಹಣ್ಣು ತೋಟದಲ್ಲಿ ಯುವತಿ ಕೆಲಸಕ್ಕೆ ಹೋಗುತ್ತಿದ್ದಳಂತೆ. ಈ ವೇಳೆ ಆಗಾಗ ತೋಟಕ್ಕೆ ಸೀಬೆ ಹಣ್ಣು ಬಾಕ್ಸ್ ಗಳನ್ನ ತೆಗೆದುಕೊಂಡು ಹೋಗಲು ಆರೋಪಿ, ಮಧುಚಂದ್ರ ಟೆಂಪೋ ತರುತ್ತಿದ್ದನಂತೆ. ಈ ವೇಳೆ ಇಬ್ಬರಿಗೂ ಪರಿಚಯವಾಗಿದ್ದು, ಆತ್ಮೀಯತೆ ಇತ್ತು ಎನ್ನಲಾಗಿದೆ.
ಆರೋಪಿಗೆ ಈಗಾಗಲೇ ಮದುವೆಯಾಗಿ ಮಗು ಕೂಡ ಇದೆ:
ಆದರೆ ಆರೋಪಿ ಮಧುಚಂದ್ರನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಒಂದು ಮಗು ಸಹ ಇದೆಯಂತೆ. ಹೀಗಿದ್ದರೂ ಪ್ರೀತಿ ಮಾಡುವಂತೆ ಹಾಗೂ ತನ್ನ ಆಸೆಯಂತೆ ನಡೆದುಕೊಳ್ಳುವಂತೆ ಆರೋಪಿ ಒತ್ತಾಯ ಮಾಡುತ್ತಿದ್ದನಂತೆ. ಮದುವೆ ವಿಚಾರ ಹಾಗೂ ಆರೋಪಿ ವರ್ತನೆಯಿಂದ ಬೇಸತ್ತು ಯುವತಿ ಆತನಿಂದ ದೂರ ಇರಲು ಆರಂಭಿಸಿದ್ದಳಂತೆ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಆರೋಪಿ, ನಿನ್ನೆ ತೋಟದಲ್ಲಿ ಅಡ್ಡ ಹಾಕಿ ಯುವತಿಯ ಕತ್ತುಕೊಯ್ದು ಪರಾರಿಯಾಗಿದ್ದ.
Bangalore 20 Year Old Girl Murdered On Her Way Back Home from college for rejecting love, slit throat. Rashi, a resident of Shanboganahalli, was a BA 1st year student at Yelahanka college who was attacked and the accused slit her throat on Tuesday evening when she was on her way home.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm