ಬ್ರೇಕಿಂಗ್ ನ್ಯೂಸ್
18-10-20 07:32 pm Headline Karnataka News Network ಕ್ರೈಂ
ತೆಲಂಗಾಣ, ಅಕ್ಟೋಬರ್. 18 : ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ಹೆಚ್ಚುತ್ತಿದ್ದರೂ ಅತ್ಯಾಚಾರ ಕಮ್ಮಿ ಆಗುತ್ತಿಲ್ಲ. ತೆಲಂಗಾಣದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಮಾನವ ಕುಲವನ್ನೇ ತಲೆತಗ್ಗಿಸಿದೆ.
ಅತ್ಯಾಚಾರ ವಿರೋಧಿಸಿದ ಕಾರಣಕ್ಕೆ 13 ವರ್ಷದ ಬುಡಕಟ್ಟು ಜನಾಂಗದ ಬಾಲಕಿಯನ್ನು ಮನೆ ಮಾಲೀಕನೇ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ತೆಲಂಗಾಣದ ಖಮ್ಮಮ್ ನಲ್ಲಿ ನಡೆದಿದೆ.
ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಗುರುವಾರ ರಾತ್ರಿ ಹೈದರಾಬಾದ್ನ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ಖಮ್ಮಮ್ ಪೊಲೀಸ್ ಆಯುಕ್ತ ತಫ್ಸೀರ್ ಇಕ್ಬಾಲ್ ತಿಳಿಸಿದ್ದಾರೆ.
ಬಾಲಕಿಯನ್ನು ಮನೆ ಕೆಲಸಕ್ಕೆಂದು ಕರೆಸಿದ್ದ ಮನೆ ಮಾಲೀಕ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು ಆಕೆ ವಿರೋಧಿಸಿದ್ದಾಳೆ. ಇದಕ್ಕಾಗಿ ಬಾಲಕಿಯನ್ನು ಪೆಟ್ರೋಲ್ನಿಂದ ಸುಟ್ಟು ಬೆಂಕಿ ಹಾಕಿದ್ದು, ದೇಹದ 70 ಶೇ. ಭಾಗ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 18 ರಂದು ಈ ಘಟನೆ ಸಂಭವಿಸಿದ್ದು, ಅಕ್ಟೋಬರ್ 5 ರಂದು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮಾಧ್ಯಮದಲ್ಲಿ ವಿಚಾರ ಹೊರಬರುತ್ತಿದ್ದಂತೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (ಟಿಎಸ್ಎಚ್ಆರ್ಸಿ) ಖಮ್ಮಮ್ ಪೊಲೀಸರಿಂದ ಘಟನೆ ಕುರಿತು ವರದಿ ಕೇಳಿದೆ.
ಇನ್ನು ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ, ಭಾರತವು 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದು, ವರ್ಷದಲ್ಲಿ ಮಹಿಳೆಯರ ವಿರುದ್ಧ ಒಟ್ಟು 4,05,861 ಅಪರಾಧ ಪ್ರಕರಣಗಳು ದಾಖಲಾಗಿದೆ. 2018ಕ್ಕೆ ಹೋಲಿಕೆ ಮಾಡಿದರೆ 2019 ರಲ್ಲಿ ಶೇ 7 ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ತಿಳಿಸಿದೆ.
A 13-year-old girl, set on fire in Telangana last month allegedly after she ignored the sexual advances of a 26-year-old man at his house where she worked as a caretaker, died today at a hospital in Hyderabad.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am