ಬ್ರೇಕಿಂಗ್ ನ್ಯೂಸ್
25-01-23 08:47 pm HK News Desk ಕ್ರೈಂ
ತಿರುವನಂತಪುರ, ಜ.25: 16 ವರ್ಷದ ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿಯೇ ಆಕೆಯನ್ನು ಮದುವೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮದುಮಗ, ಹುಡುಗಿ ತಂದೆ ಸೇರಿ ಮೂವರನ್ನು ಬಂಧಿಸಿದ್ದಾರೆ.
ಮದುವೆಯಾಗಿದ್ದ 23 ವರ್ಷದ ಅಲ್ ಅಮೀರ್, ಮದುವೆಯನ್ನು ನಿರ್ವಹಿಸಿದ್ದ ಉಸ್ತಾದ್ ಅನ್ವರ್ ಸಾದಾತ್ ಮತ್ತು ಮದುಮಗಳ ತಂದೆಯೂ ಬಂಧನ ಆಗಿದ್ದಾರೆ. 2021ರಲ್ಲಿ ಅಲ್ ಅಮೀರ್, ಅದೇ ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಪೋಕ್ಸೋ ಪ್ರಕರಣ ದಾಖಲಾಗಿ ನಾಲ್ಕು ತಿಂಗಳು ಜೈಲಿನಲ್ಲಿದ್ದ ಅಮೀರ್ ಬಳಿಕ ಜಾಮೀನಿನಲ್ಲಿ ಹೊರಬಂದಿದ್ದ.
ಆದರೆ ಜಾಮೀನಲ್ಲಿ ಹೊರಬಂದರೂ, ಹುಡುಗಿಯ ಮನೆಗೆ ತೆರಳಿ ಅತ್ಯಾಚಾರ, ಕಿರುಕುಳ ಮುಂದುವರಿಸಿದ್ದ. ಇದರಿಂದ ಬೇಸತ್ತ ಹುಡುಗಿಯ ತಂದೆ, ಮಗಳನ್ನು ಆತನಿಗೇ ಕೊಟ್ಟು ಮದುವೆ ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಆಕೆಯ ಶಾಲೆಗೆ ಹೋಗುವುದನ್ನು ನಿಲ್ಲಿಸುವಂತೆ ಮಾಡಿದ್ದಾರೆ. ಮೊನ್ನೆ ಜನವರಿ 18ರಂದು ಹುಡುಗಿಯನ್ನು ಅಮೀರನಿಗೆ ಕೊಟ್ಟು ಮದುವೆ ಮಾಡಿಸಿದ್ದರು. ಆದರೆ ಹುಡುಗಿ ಹಲವು ದಿನಗಳಿಂದ ಶಾಲೆಗೆ ಬಾರದೇ ಇದ್ದುದರಿಂದ ಶಿಕ್ಷಕರು ಮಾಹಿತಿ ಕೆದಕಿದಾಗ ಮದುವೆ ಮಾಡಿಸಿದ್ದು ಗೊತ್ತಾಗಿದೆ. ಅಪ್ರಾಪ್ತ ಹುಡುಗಿಯನ್ನು ಮದುವೆ ಮಾಡಿಸಿದ್ದಕ್ಕೆ ಪೊಲೀಸರ ಗಮನಕ್ಕೆ ತಂದಿದ್ದರು.
ಕೂಡಲೇ ಪೊಲೀಸರು ಆರೋಪಿ ಅಲ್ ಅಮೀರ್, ಮದುವೆ ಮಾಡಿಸಿದ ಉಸ್ತಾದ್ ಮತ್ತು ಹುಡುಗಿಯ ತಂದೆಯನ್ನು ಬಂಧಿಸಿದ್ದಾರೆ. ಅಮೀರ್ ವಿರುದ್ಧ ಈ ಹಿಂದೆಯೂ ಹಲವು ಪೊಲೀಸ್ ಕೇಸು ದಾಖಲಾಗಿದ್ದು, ಹಲವು ಕೇಸು ಎದುರಿಸುತ್ತಿದ್ದ. ಆದರೆ, ಆತನ ವರ್ತನೆಯಿಂದ ಬೇಸತ್ತಿದ್ದ ಹುಡುಗಿ ಮನೆಯವರು ಆಕೆಯನ್ನೇ ಕೊಟ್ಟು ಮದುವೆ ಮಾಡಿಸಿದ್ದು ಈಗ ಇವರಿಗೇ ಮುಳುವಾಗಿ ಪರಿಣಮಿಸಿದೆ.
Three people were arrested after a 16-year-old girl was married off to a man, who repeatedly raped her in 2021, at a private function held on January 18 in Kerala's Thiruvananthapuram. Among those arrested are 23-year-old Ameer--the man to whom the girl was married off, Ustad Anwar Sadath (39), who solemnized the marriage, and the girl's father.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm