ಕೊಣಾಜೆ ಪೊಲೀಸರ ಕಾರ್ಯಾಚರಣೆ ; ಕೇರಳ ಗಡಿಯಲ್ಲಿ ಭಾರೀ ಪ್ರಮಾಣದ ಗಾಂಜಾ‌ ವಶಕ್ಕೆ, ಮೂವರ ಬಂಧನ 

01-02-23 07:14 pm       Mangalore Correspondent   ಕ್ರೈಂ

ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. 

ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. 

ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಂ(25),  ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ. 

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. 

ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.

Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.