ಮಂಗಳೂರು ; ಜುವೆಲ್ಲರಿ ಉದ್ಯೋಗಿಯ ಚೂರಿಯಿಂದ ಇರಿದು ಕೊಲೆ 

03-02-23 05:07 pm       Mangalore Correspondent   ಕ್ರೈಂ

ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.‌ ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ. 

ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.‌ ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ. 

ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ.‌ ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ. 

ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.

52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.