ಸುರತ್ಕಲ್ ; ವಾಹನ ಸೈಡ್ ಕೊಡುವ ವಿಚಾರದಲ್ಲಿ ಹೊಡೆದಾಟ, ಯುವಕನಿಗೆ ಹಲ್ಲೆ

08-02-23 11:37 pm       Mangaluru Correspondent   ಕ್ರೈಂ

ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್‌ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ನಡೆದಿದೆ.

ಮಂಗಳೂರು, ಫೆ.8: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್‌ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ನಡೆದಿದೆ.

ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ನಾಗೇಶ್ ಮತ್ತು ಆತನ ಜೊತೆಗಿದ್ದವರು ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು ಹಲ್ಲೆ ನಡೆಸಿದ ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸೈಡ್ ಕೊಡುವ ವಿಚಾರದಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಸವಾರರ ನಡುವೆ ಗಣೇಶಪುರದಲ್ಲಿ ಮೊದಲಿಗೆ ಮಾತಿನ ಚಕಮಕಿ ಉಂಟಾಗಿತ್ತು. ಇದೇ ಹೊಯ್ದಾಟ ಮುಂದುವರಿದು ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ‌. ಸಾರ್ವಜನಿಕರು ಮಧ್ಯಪ್ರವೇಶಿಸಿ ಹೆಚ್ಚಿನ ಅನಾಹುತ ತಡೆದಿದ್ದಾರೆ. ಈ ಕುರಿತಂತೆ ಎರಡೂ ಕಡೆಯವರು ಪೊಲೀಸ್ ದೂರು ನೀಡುತ್ತೇವೆ ಎಂದಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Surathkal Fazils brother Adil assulted by nagesh over trival issue while going in the bike for not giving way at Katipalla in Mangalore. A case has been reisterd at Surathkal police station