ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm