ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm