ಬ್ರೇಕಿಂಗ್ ನ್ಯೂಸ್
21-10-20 02:23 pm Mangaluru Correspondent ಕ್ರೈಂ
ಮಂಗಳೂರು, ಅಕ್ಟೋಬರ್ 21: ತುಳು ಚಿತ್ರನಟ, ರೌಡಿ ಶೀಟರ್ ಆಗಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ಭಂಡಾರಿಬೆಟ್ಟುವಿನ ಅಪಾರ್ಟ್ಮೆಂಟ್ ಒಂದರಲ್ಲಿ ಕೃತ್ಯ ನಡೆದಿದೆ.
ನಿನ್ನೆ ರಾತ್ರಿ ಮನೆಗೆ ನುಗ್ಗಿ ಯಾರೋ ದುಷ್ಕರ್ಮಿಗಳು ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಚಾಕು ಇರಿದು ಕೊಲೆಗೈದಿರುವ ಸ್ಥಿತಿಯಲ್ಲಿ ಶವ ಮನೆಯ ಒಳಗಿನ ಸೋಫಾದಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಬೆಳಗ್ಗಿನಿಂದಲೂ ಮನೆಯ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಪರಿಶೀಲಿಸಿದಾಗ ಶವ ಪತ್ತೆಯಾಗಿದೆ. ಮನೆಯ ಬಾಗಿಲು ಎಳೆದುಕೊಂಡ ರೀತಿ ಇತ್ತು. ಸುರೇಂದ್ರ ಬಂಟ್ವಾಳ್ ಅವಿವಾಹಿತನಾಗಿದ್ದು ಈ ಫ್ಲಾಟ್ ನಲ್ಲಿ ಒಬ್ಬಂಟಿಯಾಗಿ ಇರುತ್ತಿದ್ದ.
ಮನೆಯ ಒಳಗೆ ಪರಿಶೀಲನೆ ವೇಳೆ ನಿನ್ನೆ ರಾತ್ರಿ ಪಾರ್ಟಿ ನಡೆಸಿರುವಂತೆ ಕಂಡುಬರುತ್ತಿದೆ. ಹೀಗಾಗಿ ಕೊಲೆಯಲ್ಲಿ ಸ್ನೇಹಿತರದ್ದೇ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿಯೇ ಕೊಲೆ ನಡೆಸಿ ಹೋಗಿದ್ದಾರೆಯೇ ಅಥವಾ ಬೆಳಗ್ಗೆ ಯಾರಾದ್ರೂ ಮನೆಗೆ ಬಂದು ಹತ್ಯೆ ನಡೆಸಿದ್ದಾರೆಯೇ ಎನ್ನುವ ನೆಲೆಯಲ್ಲಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.









ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಹಿಂದೆ ಬಂಟ್ವಾಳದಲ್ಲಿ ರೌಡಿ ಶೀಟರ್ ಆಗಿದ್ದ ಸುರೇಂದ್ರ ಭಂಡಾರಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಹಲವು ಕೇಸುಗಳಿವೆ. ಆಬಳಿಕ ತುಳು ಚಿತ್ರರಂಗದಲ್ಲಿ ತೊಡಗಿಸಿದ್ದ ಸುರೇಂದ್ರ ಬಂಟ್ವಾಳ್, ಚಾಲಿಪೋಲಿಲು ಚಿತ್ರದಲ್ಲಿ ನಟಿಸಿದ್ದರು. ಇತ್ತೀಚೆಗೆ ಸವರ್ಣ ದೀರ್ಘ ಸಂಧಿ ಚಿತ್ರದಲ್ಲಿ ಸುರೇಂದ್ರ ನಟಿಸಿದ್ದು ಚಿತ್ರ ಬಿಡುಗಡೆಗೆ ರೆಡಿಯಾಗಿತ್ತು.
ಮಂಗಳೂರಿನಲ್ಲಿ ಫೈನಾನ್ಸ್ ಕೂಡ ಮಾಡಿಕೊಂಡಿದ್ದ ಸುರೇಂದ್ರ, ಎರಡು ವರ್ಷಗಳ ಹಿಂದೆ ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ಬೀಸಿ ಬಂಧನಕ್ಕೊಳಗಾಗಿದ್ದ. ಆನಂತರ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.
Video:
Tulu Actor and Rowdy sheeter Surendra Bantwal was hacked to death in broad day light on Wednesday October 21. The incident took place at at Vasti Katta, Bastipadpu.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm