ಬ್ರೇಕಿಂಗ್ ನ್ಯೂಸ್
18-02-23 10:55 am HK News Desk ಕ್ರೈಂ
ರಾಮನಗರ, ಫೆ.18: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಅಪ್ರಾಪ್ತೆಯ ಕಣ್ಣಿಗೆ ಗಾಯಗಳಾಗಿದ್ದು, ಕೂಡಲೇ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 22 ವರ್ಷ ವಯಸ್ಸಿನ ಆರೋಪಿ ಯುವಕ, ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಸಾಮಾಜಿಕ ಮಾಧ್ಯಮದ ಮೂಲಕ ಇಬ್ಬರು ಪರಿಚಿತರಾಗಿದ್ದರು. ಈ ವೇಳೆ ಯುವಕ ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಬಾಲಕಿ, ಇತ್ತೀಚೆಗಷ್ಟೇ ಮಾತನಾಡುವುದನ್ನು ನಿಲ್ಲಿಸಿದ್ದಳು.
ಈ ವಿಚಾರವಾಗಿ ಸಿಟ್ಟಿಗೆದ್ದಿದ್ದ ಯುವಕ, ಬಾಲಕಿಗೆ ಕರೆ ಮಾಡಿ ಮಾತನಾಡಲು ಬೈಪಾಸ್ ರಸ್ತೆಗೆ ಬರಬೇಕೆಂದು ಕೇಳಿದ್ದಾನೆ. ಅದರಂತೆ ಬಾಲಕಿ ತನ್ನ ತಮ್ಮನ ಜೊತೆ ತೆರಳಿ ಆತನನ್ನು ಭೇಟಿಯಾಗುತ್ತಾಳೆ. ಈ ವೇಳೆ ಯುವಕ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ. ಆಗಲೂ ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಮುಖದ ಮೇಲೆ ಎರಚಿದ್ದಾನೆ.
ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಸದ್ಯ ರಾಜ್ಯ ಮಹಿಳಾ ಆಯೋಗವು ರಾಮನಗರ ಎಸ್ಪಿಗೆ ಕರೆ ಮಾಡಿದ್ದು, ಅಪ್ರಾಪ್ತ ಯುವತಿಯ ಮೇಲೆ ಆ್ಯಸಿಡ್ ದಾಳಿ ವಿಚಾರದ ಮಾಹಿತಿ ಪಡೆದಿದ್ದಾರೆ. ಜೊತೆಗೆ ದಾಳಿ ಮಾಡಿರೋ ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇಂದು ಯುವತಿಯನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಲಿದ್ದಾರೆ. ಇನ್ನು ಕನಕಪುರ ನಗರ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Acid attack on minor girl in ramnagara for refusing love. The girl is said to be hospitalised. Search for the accused is in full swing by the police.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm