ಬ್ರೇಕಿಂಗ್ ನ್ಯೂಸ್
18-02-23 10:55 am HK News Desk ಕ್ರೈಂ
ರಾಮನಗರ, ಫೆ.18: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಅಪ್ರಾಪ್ತೆಯ ಕಣ್ಣಿಗೆ ಗಾಯಗಳಾಗಿದ್ದು, ಕೂಡಲೇ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 22 ವರ್ಷ ವಯಸ್ಸಿನ ಆರೋಪಿ ಯುವಕ, ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಸಾಮಾಜಿಕ ಮಾಧ್ಯಮದ ಮೂಲಕ ಇಬ್ಬರು ಪರಿಚಿತರಾಗಿದ್ದರು. ಈ ವೇಳೆ ಯುವಕ ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಬಾಲಕಿ, ಇತ್ತೀಚೆಗಷ್ಟೇ ಮಾತನಾಡುವುದನ್ನು ನಿಲ್ಲಿಸಿದ್ದಳು.
ಈ ವಿಚಾರವಾಗಿ ಸಿಟ್ಟಿಗೆದ್ದಿದ್ದ ಯುವಕ, ಬಾಲಕಿಗೆ ಕರೆ ಮಾಡಿ ಮಾತನಾಡಲು ಬೈಪಾಸ್ ರಸ್ತೆಗೆ ಬರಬೇಕೆಂದು ಕೇಳಿದ್ದಾನೆ. ಅದರಂತೆ ಬಾಲಕಿ ತನ್ನ ತಮ್ಮನ ಜೊತೆ ತೆರಳಿ ಆತನನ್ನು ಭೇಟಿಯಾಗುತ್ತಾಳೆ. ಈ ವೇಳೆ ಯುವಕ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ. ಆಗಲೂ ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಮುಖದ ಮೇಲೆ ಎರಚಿದ್ದಾನೆ.
ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಸದ್ಯ ರಾಜ್ಯ ಮಹಿಳಾ ಆಯೋಗವು ರಾಮನಗರ ಎಸ್ಪಿಗೆ ಕರೆ ಮಾಡಿದ್ದು, ಅಪ್ರಾಪ್ತ ಯುವತಿಯ ಮೇಲೆ ಆ್ಯಸಿಡ್ ದಾಳಿ ವಿಚಾರದ ಮಾಹಿತಿ ಪಡೆದಿದ್ದಾರೆ. ಜೊತೆಗೆ ದಾಳಿ ಮಾಡಿರೋ ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇಂದು ಯುವತಿಯನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಲಿದ್ದಾರೆ. ಇನ್ನು ಕನಕಪುರ ನಗರ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Acid attack on minor girl in ramnagara for refusing love. The girl is said to be hospitalised. Search for the accused is in full swing by the police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm