ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm