ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm