ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am