ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm