ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm