ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm