ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm